ಅವಲಕ್ಕಿ ಪವಲಕ್ಕಿ

ಅವಲಕ್ಕಿ
ಪವಲಕ್ಕಿ
ಕಾಂಚನ
ಮಿಣ ಮಿಣ
ಡಾಮ್ ಡೂಮ್
ಟಸ್ ಪುಸ್
ಕೊಯ್ ಕೊಟರ್

ಇದರ ಸಾರಾಂಶ ಹೀಗಿದೆ:
ಈ ಜನಪದ ಹಾಡು ಭೂಮಿಯ ಮೇಲೆ ಮನುಶ್ಯನ ಜೀವನದ ಘಟ್ಟಗಳನ್ನು ತಿಳಿಸುತ್ತದೆ.ಅವಲಕ್ಕಿ - ಮನುಶ್ಯ ಚಿಕ್ಕವನಿದ್ದಾಗ ಅವಲಕ್ಕಿ ತಿನ್ನುತ್ತಾನೆಪವಲಕ್ಕಿ - ದೊಡ್ಡವರಾಗುತ್ತಾ ಪಾವಕ್ಕಿಯನ್ನು ತಿನ್ನುತ್ತಾನೆಕಾಂಚನ - ಯುವಕನಾಗಿ ಕೆಲಸಕ್ಕೆ ಸೇರಿದ ಮೇಲೆ ದುಡ್ಡು ಕೈಯಲ್ಲಿ ಓಡಾಡುತ್ತದೆಮಿಣ ಮಿಣ - ಕೆಲಸ ದುಡ್ಡು ಎಲ್ಲ ಇರುವಾಗ ಅವನ ಜೀವನದಲ್ಲಿ ಎಲ್ಲ ಮಿಣ ಮಿಣ ಎಂದು ಹೊಳೆಯುತ್ತಿರುತ್ತದೆಡಾಮ್ ಡೂಮ್ - ನಂತರ ಅವನ ಮದುವೆ ಟಸ್ ಪುಸ್ - ಮದುವೆಯಾಗಿ ಮಕ್ಕಳಾದ ನಂತರ ವ್ಯಕ್ತಿಯ ಜೀವನದಲ್ಲಿ ಎಲ್ಲಾ ಟಸ್ ಪುಸ್; ಏಕೆಂದರೆ ಮಕ್ಕಳು ಹೇಳುವುದನ್ನಲ್ಲವೇ ದೊಡ್ಡವರು ಕೇಳುವುದು ಕೊಯ್ ಕೊಟರ್ - ನಂತರ ವ್ಯಕ್ತಿಯ ಮರಣ

Honey ಕವಿತೆ

ಸ್ತ್ರೀ ಸ್ವಾತಂತ್ರ್ಯದ ಬಗ್ಗೆಬರೆವ ಹುಡುಗಿ,
ಬೇರಾರದೋ ಮನೆಯಲಿದ್ದೇನೆ,
ಅವರೆದುರು ಮಾತಾಡಲು
ಒಂಥರಾ ಅನ್ನುವಕಾರಣಕ್ಕೆ ಫೋನು
ರಿಸೀವ್ ಮಾಡಲಿಲ್ಲ.


ಗೆಜ್ಜೆಗಳೆಂದರೆ ರೋಮಾಂಚನ,
ಮಧುರಪ್ರೇಮ ಸಂಕೇತ
ಅಂತ ಕವಿತೆ ಬರೆಯುವ ಹುಡುಗ
ಕದ್ದು ಸೇರುವಾಗ
ಅವಳ ಬಳಿ"ಗೆಜ್ಜೆ ತೆಗೆದಿಡುಸದ್ದಾಗುತ್ತದೆ" ಅಂದ.

ತೂತಿನಾಚಿಗೆ ಏನು
ನಡೆಯುತ್ತಿದೆ ಅಂತ ಕಣ್ಣು ಕಿರಿದಾಗಿಸಿ
ಆ ಕಡೆ ನೋಡಿದರೆ,ಇನ್ನೊಂದು ಕಣ್ಣು ಕಂಡಿತು!

:-)

ಒಂದೇ ವಸ್ತು ಮೂರು ಕತೆ

ಕತೆ ೧:

ರಾಜಕುಮಾರ. ರಾತ್ರಿ ಮಲಗಿದಾಗ ಆತನ ಕೋಣೆಯಲ್ಲಿರುವ ದೀಪದ ಮೊಲ್ಲೆ ವಿಗ್ರಹಕ್ಕೆ ಜೀವ ಬಂದು ಆತನನ್ನು ಸೇರುತ್ತಾಳೆ. ರಾಜಕುಮಾರನಿಗೆ ದೀಪದ ಮೊಲ್ಲೆಯನ್ನಲ್ಲದೇ ಯಾವ ಹುಡುಗಿಯನ್ನೂ ಕಣ್ಣೆತ್ತಿ ನೋಡಲಾರ. ಆತನ ತಾಯಿ ಯಾರ್ಯಾರಿಗೋ ಕೇಳಿ, ಕೊನೆಗೆ ರಾಜಕುಮಾರನನ್ನೇ ತುಂಡರಿಸಿ ಎರಡು ಭಾಗ ಮಾಡಿ ಎರಡು ಮಡಿಕೆಗಳಲ್ಲಿ ಹೂತು ಹಾಕುತ್ತಾರೆ. ಒಂದರಿಂದ ರಾಜಕುಮಾರ ಬರುತ್ತಾನೆ. ಇನ್ನೊಂದರಿಂದ ದೀಪದ ಮೊಲ್ಲೆ ಬರುವುದಿಲ್ಲ, ಬದಲಿಗೆ ಕಾಳಿಂಗ ಹೊರಬರುತ್ತದೆ. ಜನ ಕಾಳಿಂಗನನ್ನು ಹೊಡೆಯಲು ಹೊರಡುತ್ತಾರೆ, ಕಾಳಿಂಗ ತಪ್ಪಿಸಿಕೊಂಡು ಕಾಡು ಸೇರುತ್ತಾನೆ. ರಾಜಕುಮಾರ ವಿಡಿಯಿಲ್ಲದೇ ತಾಯಿ ಹೇಳಿದ ಹುಡುಗಿಗೆ ತಾಳಿ ಕಟ್ಟಿ, ಊರೂರು ಸುತ್ತತೊಡಗುತ್ತಾನೆ, ದೀಪದ ಮೊಲ್ಲೆಯ ಹುಡುಕಾಟದಲ್ಲಿ. ಕಾಳಿಂಗ ರಾಜಕುಮಾರನ ರೂಪ ತಾಳಿ ರಾಜಕುಮಾರನ ಹೆಂಡತಿಯೊಡನೆ ಸರಸದಲ್ಲಿ ತೊಡಗುತ್ತಾನೆ, ಆಕೆ ಗರ್ಭಿಣಿಯಾಗುತ್ತಾಳೆ. ಆಗ ರಾಜಕುಮಾರನಿಗೆ ತನ್ನ ಹೆಂಡತಿಯ ಶೀಲದ ಮೇಲೆ ಸಂದೇಹ. ಅವಳ ಪರೀಕ್ಷೆಯಾಗುತ್ತದೆ. ಅವಳು, "ನನ್ನ ಗಂಡ ಮತ್ತು ಈ ಸರ್ಪವನ್ನಲ್ಲದೇ ಬೇರೆ ಯಾವ ಗಂಡನನ್ನು ಮುಟ್ಟಿದ್ದರೂ ನನಗೆ ಈ ಸರ್ಪ ಕಚ್ಚಲಿ" ಎನ್ನುತ್ತಾಳೆ, ಗೆಲ್ಲುತ್ತಾಳೆ. ರಾಜಕುಮಾರನಿಗೆ ತಲೆ ಕೆಟ್ಟು ಅಂತಪುರಕ್ಕೆ ಪಹರೆಯಿಡುತ್ತಾನೆ. ಕಾಳಿಂಗ ಸಿಕ್ಕಿಹಾಕಿಕೊಳ್ಳುತ್ತಾನೆ. ಇಬ್ಬರಿಗೂ ಯುದ್ಧವಾಗಿ ಕಾಳಿಂಗ ಸಾಯುತ್ತಾನೆ, ಕಾಳಿಂಗ ಸಾಯುತ್ತಿದ್ದಂತೆ ರಾಜಕುಮಾರನೂ ಸಾಯುತ್ತಾನೆ. ಸಾಯುವಾಗ ಹೆಂಡತಿಗೆ ಹೇಳುತ್ತಾನೆ, "ನನ್ನಂತೆ ಈ ಹೊಟ್ಟೆಯಲ್ಲಿರುವ ಮಗುವನ್ನು ಎರಡು ಮಾಡಲು ಬಿಡಬೇಡ".

ಕತೆ ೨:

ಹಳ್ಳಿಯ ಶ್ರೀಮಂತ ಚಲುವ ಯಾವಾಗಲೂ ತನ್ನ ವೇಶ್ಯೆಯ ಹತ್ತಿರವೇ! ತಾಯಿ ತಡೆಯಲಾಗದೇ ಮಗನ ಮದುವೆ ಮಾಡುತ್ತಾಳೆ, ಏನುಪಯೋಗ? ಮನೆಯ ಹತ್ತಿರದ ಕಾಳಿಂಗವೊಂದು ಶ್ರೀಮಂತನ ರೂಪತಾಳಿ ಹೊಸ ಹುಡುಗಿಯೊಡನೆ ರತಿಕ್ರೀಡೆಯಲ್ಲಿ ತೊಡಗುತ್ತದೆ, ಆಕೆ ಗರ್ಭಿಣಿಯಾಗುತ್ತಾಳೆ. ಮೇಲಿನ ತರಹದ್ದೇ ಪರೀಕ್ಷೆ, ಗೆಲ್ಲುತ್ತಾಳೆ. ಶ್ರೀಮಂತನಿಗೆ ತಲೆ ಕೆಟ್ಟು ಅವಳ ಮೇಲೆ ಕಣ್ಣಿಡುತ್ತಾನೆ, ಕಾಳಿಂಗ ಸಿಕ್ಕಿ ಹಾಕಿಕೊಳ್ಳುತ್ತಾನೆ. ಇಬ್ಬರ ಯುದ್ಧದಲ್ಲಿ, ಕಾಳಿಂಗ ಸಾಯುತ್ತಾನೆ, ಶ್ರೀಮಂತ ತನ್ನ ತಪ್ಪಿನ ಅರಿವಾಗಿ ಹೊಟ್ಟೆಯಲ್ಲಿರುವ ಮಗುವನ್ನು ತನ್ನದೆಂದು ಒಪ್ಪಿ, ಹೆಂಡತಿಯೊಡನೆ ಸುಖವಾಗಿ ಬಾಳುತ್ತಾನೆ.

ಕತೆ ೩:

ವರ್ತಕರ ವಂಶ. ಮಗನಿಗೆ ಮದುವೆಯಾಗುತ್ತಿದ್ದಂತೆ ಆತ ಊರು ಬಿಟ್ಟು ಹೋಗುತ್ತಾನೆ. ಭೂತವೊಂದು ಆತನ ವೇಷ ಧರಿಸಿ ಹೊಸ ಹೆಂಡತಿಗೆ ಗರ್ಭಧಾರಣೆ ಮಾಡುತ್ತದೆ. ಎಲ್ಲ ಮೇಲಿನೆರೆಡು ಕತೆಗಳಲ್ಲಿದ್ದಂತೇ ನಡೆದು ಹೋಗುತ್ತದೆ.

ಮೊದಲ ಕತೆಯನ್ನು ನಾಟಕದಲ್ಲಿ ಬರೆದವರು ಚಂದ್ರಶೇಖರ ಕಂಬಾರ. ಎರಡನೇ ಕತೆ ಕಾರ್ನಾಡರ "ನಾಗಮಂಡಲ". ಮೂರನೇ ಕತೆ, ಹಿಂದಿಯಲ್ಲಿ ಚಲನಚಿತ್ರವಾದ, "ಪಹೇಲಿ".ಈ ಕತೆ ಯಾಕೆ ಇಷ್ಟು ಜನರ ತಲೆ ತಿಂದು ನಾಟಕ, ಸಿನೆಮಾ ಆಯಿತು? ಭಾರತೀಯ ತತ್ವಶಾಸ್ತ್ರದಲ್ಲಿ ದೇಹ ಮತ್ತು ಆತ್ಮ, ಲೌಕಿಕ ಮತ್ತು ಅಲೌಕಿಕ, ಕಾಮ ಮತ್ತು ಪ್ರೇಮ, ರಾಜಸ ಮತ್ತು ಸಾತ್ವಿಕ ಗಳ ನಡುವಿನ ಮಸೆದಾಟ ವೇದಗಳಿಂದಲೂ ಬಂದಿದೆ, ಭಾರತದ ಮೂಲೆ ಮೂಲೆಗಳಲ್ಲಿರುವ ಜನಪದ ಕತೆಗಳಲ್ಲಿ ಕೂಡ ಈ ತಿಕ್ಕಾಟ ಕಾಣಬಹುದು. ಈ ಮೇಲಿನ ಮೂರು ಕತೆಗಳೂ ಒಂದೇ ಜಾನಪದ ಕತೆಯ ಬೇರೆ ಬೇರೆ ರೂಪಗಳು. ಆಧುನಿಕ ಸಾಹಿತ್ಯದಲ್ಲಿ, ಅದರಲ್ಲೂ ನವ್ಯ ಸಾಹಿತ್ಯದಲ್ಲಿ ಈ ತುಮುಲವನ್ನು ಮೇಲಿಂದ ಮೇಲೆ ನೋಡುತ್ತೇವೆ. ದೇಹಕ್ಕಿಂತ ಮನಸ್ಸು-ಆತ್ಮ ಮುಖ್ಯ, ಲೌಕಿಕಕ್ಕಿಂತ ಅಲೌಕಿಕ, ಕಾಮುಕ್ಕಿಂತ ಪ್ರೇಮ-ಭಕ್ತ್ತಿ, ರಾಜಸಕ್ಕಿಂತ ಸಾತ್ವಿಕ ದೊಡ್ಡದು, ಮತ್ತು ಅದರ ಹುಡುಕಾಟದಲ್ಲೇ ನಮ್ಮ ಅಭಿವೃದ್ಧಿ-ಮುಕ್ತಿ, ಮೋಕ್ಷ ಎಂಬುದು ವೈದಿಕ ನಂಬಿಕೆ. ಆದರೆ ದೇಹ, ಲೌಕಿಕ, ಕಾಮಗಳಲ್ಲಿ ಮುಕ್ತಿ ಕಾಣುವ ಚಾರ್ವಾಕರು ವೇದಕಾಲದಿಂದಲೂ ಉಲ್ಲೇಖಗೊಂಡಿದ್ದಾರೆ. ವೈದಿಕದ ಕತೆಗಳಲ್ಲಿ ಆತ್ಮ ಗೆಲ್ಲುತ್ತದೆ (ನಚಿಕೇತ), ಪ್ರೇಮ ಗೆಲ್ಲುತ್ತದೆ (ಸಾವಿತ್ರಿ). ಆದರೆ ಜನಪದ ಕತೆಗಳಲ್ಲಿ ದೇಹ ಗೆಲ್ಲುತ್ತದೆ, ಕಾಮ ಮನುಷ್ಯನ ಸಹಜ ಗುಣ ಎನ್ನುತ್ತದೆ. ಅಧುನಿಕ ಸಾಹಿತ್ಯದಲ್ಲಿ ಈ ವಿಭಜನೆಯ ಸಂಕೀರ್ಣತೆ ಈ ಮೂರು ಕತೆಗಳಲ್ಲಿ ಬಿಚ್ಚಿಕೊಳ್ಳುತ್ತಾ ಹೋಗುತ್ತದೆ. ಆದರೆ ಈ ಮೂರು ಕತೆಗಳಲ್ಲಿ ನನ್ನ ಆಯ್ಕೆ, ಕಂಬಾರರ "ಸಿರಿಸಂಪಿಗೆ". ನಾಟಕದ ಅಂತ್ಯದಲ್ಲಿ ದೇಹ-ಆತ್ಮದ, ಲೌಕಿಕ-ಅಲೌಕಿಕದ, ಕಾಮ-ಪ್ರೇಮದ ಅದ್ವೈತದಲ್ಲಿ ಮನುಷ್ಯ ಬದುಕಲು ಸಾಧ್ಯವಿದ್ದರೆ ಎಷ್ಟು ಚೆನ್ನಿತ್ತು ಎಂಬ ಪ್ರಶ್ನೆಯೊಂದಿಗೆ ಮುಗಿಯುತ್ತದೆ.

ವಾಟರ್ ಬಿಟ್ಟು ಅರ್ತ್ ಮೇಲೆ ಬೋಟು ಓಂಟು ಗೋ

ವಾಟರ್ ಬಿಟ್ಟು ಅರ್ತ್ ಮೇಲೆ ಬೋಟು ಓಂಟು ಗೋ
ಅರ್ತ್ ಬಿಟ್ಟು ವಾಟರ್ ಮೇಲೆ ಕಾರ್ಟು ಓಂಟು ಗೋ
ನನ್ನ ಬಿಟ್ಟು ನಿನ್ನ, ನಿನ್ನ ಬಿಟ್ಟು ನನ್ನ ಲೈಫು ಓಂಟು ಗೋ ಪ
ಸನ್ನು ಬರದೆ ಲೋಟಸ್ ಎಂದು ಅರಳದು
ಮೂನು ಇರದೆ ಸ್ಟಾರು ಎಂದು ನಲಿಯದು
ಲವ್ವು ಮೂಡದಿರಲು ಹಾರ್ಟು ಅರಳದು
ಹಾರ್ಟು ಅರಳದಿರಲು ಸ್ಟಾರ್ಟು ಆಗದು
ಹಾರ್ಟು ಅರಳದಿರಲು ಸ್ಟಾರ್ಟು ಆಗದು ೧
ದುನಿಯಾದಲ್ಲಿ ಗಂಡು ಹೆಣ್ಣಿಗಾಸರೆ
ಬಟ್ ಇಲ್ಲಿ ನಾನು ನಿನ್ನ ಅರೆಸ್ಟ್-ರೆ
ಕೂಡಿ ಡಿಸ್ಕೋ ಆಸೆ ಮನದಿ ಕಾದಿರೆ
ಪೀಸು ಎಲ್ಲಿ ನೀನು ಬೇರೆ ಆದರೆ
ಪೀಸು ಎಲ್ಲಿ ನೀನು ಬೇರೆ ಆದರೆ ೨

ಅವಳ ಬೆನ್ನು ನೋಡುವ ಧೈರ್ಯವಿಲ್ಲ

ಒಂದು ಮಳೆ ನಿಂತ ಮಧ್ಯಾಹ್ನಅವಳು ಸಿಕ್ಕಳು, ಅನಿರೀಕ್ಷಿತವಾಗಿ
ಆಗ ತಾನೆ ಬಂದ ಮಳೆಯಂತೆ.
ಮಾತಾಡಲಿಲ್ಲ ಇಬ್ಬರೂ, ಘಳಿಗೆ
ಅವಳ ಕಣ್ಣಲ್ಲಿ ನೀರು ಕಂಡಂತಾಯಿತು
ಘಟಿಸಿದ ಭೂತಕ್ಕೆ ಶ್ರದ್ಧಾಂಜಲಿಯೆಂಬಂತೆ
ಹೊರಟೆವು ಮುಂದೆ, ಮಾತೇನೂ ಆಡದೆ
ಹೊರಡುವ ಮುನ್ನ ಅವಳ ಕೈ ಸೋಕಿತು
ಕಳೆದ ದಿವ್ಯಗಳ ಕೊನೆ ಝಲಕಂತೆ
ನಾಲ್ಕೆಂಟು ಹೆಜ್ಜೆಗಳಾದ ಮೇಲೆ ತಿರುಗಬೇಕೆನಿಸಿತು
ತಿರುಗಲಿಲ್ಲ, ಏನೂ ಘಟಿಸದು, ಗೊತ್ತು..
ಆದರೂ,ಅವಳ ಬೆನ್ನು ನೋಡುವ ಧೈರ್ಯವಿಲ್ಲ.